ಪುಟ್ಟನಿಗೆ ಹೇಳಿಕೊಡ್ತಾ ಇದ್ದೆ, " ಪುಟ್ಟಾ, ಯಾರಾದ್ರು ನಿನ್ನ ಕೂಗಿದ್ರೆ ಓ ಅನ್ಬೇಕು" ಅಂಥಾ, ಪುಟ್ಟಾ ಕೇಳ್ದಾ, " ಅಮ್ಮಾ, ನಾ ಪೀ ಹೇಳಲಾ?". ಗೊತ್ತಾಯ್ತಲ್ವ ನಿಮಗೆ, ಪುಟ್ಟಾ ಏನಕ್ಕೆ ಹಾಗೆ ಕೇಳ್ದಾ ಅಂಥಾ??
ನನ್ನ ಬಗ್ಗೆ...
- ವಿದ್ಯಾ ರಮೇಶ್
- ಬೆಂಗಳೂರು , ಕರ್ನಾಟಕ, India
- ಹುಟ್ಟಿದ್ದು, ಬೆಳೆದಿದ್ದು ಉತ್ತರ ಕನ್ನಡ ಜಿಲ್ಲೆಯ, ಯಲ್ಲಾಪುರದ ಸಮೀಪ ಒಂದು ಹಳ್ಳಿಯಲ್ಲಿ. ಓದಿದ್ದು, ಯಲ್ಲಾಪುರ, ಉಜಿರೆ, ರಾಣೆಬೆನ್ನೂರಿನಲ್ಲಿ. ಕೈ ಹಿಡಿದಿದ್ದು ಉತ್ತರ ಕನ್ನಡ ಜಿಲ್ಲೆಯ, ಸಿದ್ದಾಪುರದ ಹತ್ತಿರದ ಒಂದು ಹಳ್ಳಿಯವರನ್ನು. ನೆಲೆಸಿದ್ದು ಬೆಂಗಳೂರಿನಲ್ಲಿ. ವೃತ್ತಿಯಲ್ಲಿ, ಅಭಿಯಂತರಳು (ಇಂಜಿನಿಯರ್), ಪ್ರವೃತ್ತಿಗಳು ಅನೇಕ. ಮನಸ್ಸಿಗೆ ತೋಚಿದ್ದನ್ನು ಹಂಚಿಕೊಳ್ಳುವ ಆಸೆಯಿಂದ ಇಲ್ಲಿದ್ದೇನೆ. ಓದಿ, ತಪ್ಪಿದ್ದಲ್ಲಿ ತಿದ್ದಿ, ಪ್ರೋತ್ಸಾಹಿಸಿ :)
December 31, 2010
ನನ್ನಿನಿಯ ನೀನು...!!
[ಯಾವಾಗಲೂ ಅಷ್ಟೇ, ಕವನ ಬರೆಯಬೇಕೆಂದುಕೊಂಡಾಗ ಮೊದಲು ನೆನಪಾಗುವುದು, ರಮೇಶ್, ಚಿರಾಗ್ ಇಲ್ಲಾ ಅಪ್ಪ-ಅಮ್ಮ. ಈಗಲೂ ಸಹ ಗೀಚಿರುವುದು ರಮೇಶ್ ಮೇಲೆ :)]
ಕೆನ್ನೆ ಕೆಂಪೇರಿತ್ತು,
ಸಂಜೆ ರಂಗೇರಿತ್ತು,
ನೀನಿತ್ತ ಹೂ ಮುತ್ತು,
ತರಿಸಿತ್ತು ಮತ್ತು!!
ಆ ನಿನ್ನ ಪ್ರೀತಿ,
ಆದರದ ರೀತಿ,
ಒಲುಮೆಯಾ ನೀತಿ,
ಬಾಳಿನಾ ಪ್ರಣತಿ!!
ಮುಗ್ಧವಾದ ಮನಸು,
ಮಗುವಿನಂತೆ ಎಳಸು,
ನನ್ನೊಳಗಿನ ಕನಸು
ನೀನಾದೆ ನನಸು!!
ಕಣ ಕಣದಲು ನೀನು,
ಜೀವನವೇ ಸಿಹಿಜೇನು ,
ನಾ ಭೂಮಿ ನಿ ಬಾನು,
ನಿನ್ನಗಲಿ ಇರುವೆನೇನು?
ಕೆನ್ನೆ ಕೆಂಪೇರಿತ್ತು,
ಸಂಜೆ ರಂಗೇರಿತ್ತು,
ನೀನಿತ್ತ ಹೂ ಮುತ್ತು,
ತರಿಸಿತ್ತು ಮತ್ತು!!
ಆ ನಿನ್ನ ಪ್ರೀತಿ,
ಆದರದ ರೀತಿ,
ಒಲುಮೆಯಾ ನೀತಿ,
ಬಾಳಿನಾ ಪ್ರಣತಿ!!
ಮುಗ್ಧವಾದ ಮನಸು,
ಮಗುವಿನಂತೆ ಎಳಸು,
ನನ್ನೊಳಗಿನ ಕನಸು
ನೀನಾದೆ ನನಸು!!
ಕಣ ಕಣದಲು ನೀನು,
ಜೀವನವೇ ಸಿಹಿಜೇನು ,
ನಾ ಭೂಮಿ ನಿ ಬಾನು,
ನಿನ್ನಗಲಿ ಇರುವೆನೇನು?
Subscribe to:
Posts (Atom)